ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ರವರು ನಗರದ ಬಜಾಲ್ ಅಂಡರ್ ಪಾಸ್ ಬಳಿ ಇರುವ ವೀರನಗರ ಹಾಗೂ ಜಯನಗರಕ್ಕೆ ಹೋಗುವ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಸುಮಾರು 1.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಕಾಮಗಾರಿಯನ್ನು ಲ್ಯಾಂಡ್ ಆರ್ಮಿ ಸಂಸ್ಥೆಗೆ ವಹಿಸಲಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಈ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಸದಸ್ಯರಾದ ಲ್ಯಾನ್ಸ್ ಲಾಟ್ ಪಿಂಟೋ, ಅಧಿಕಾರಿಗಳಾದ ಲಿಂಗೇ ಗೌಡ, ಯಶವಂತ, ಗಣಪತಿ ಹಾಗೂ ಅಶ್ರಫ್ ಬಜಾಲ್, ಸುಧೀರ್ ಟಿ.ಕೆ., ಕೃತಿನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಬಜಾಲ್ ಅಂಡರ್ ಪಾಸ್ ಭೇಟಿ

Image from post regarding ಬಜಾಲ್ ಅಂಡರ್ ಪಾಸ್ ಭೇಟಿ