ಮಂಗಳೂರು: ಮಂಗಳೂರನ್ನು ಸ್ಮಾಟ್ ಸಿಟಿಯನ್ನಾಗಿ ಘೋಷಣೆದ ಕೇಂದ್ರ ಸರ್ಕಾರವನ್ನು, ಮಂಗಳೂರನ್ನು ಸ್ಮಾರ್ಟ್ ಸಿಟಿ ಮಾಡಲು ನೆರವಾದ ರಾಜ್ಯ ಸರ್ಕಾರವನ್ನು, ಜನಪ್ರತಿನಿಧಿಗಳನ್ನು ಮಂಗಳೂರು ಶಾಸಕ ಜೆ.ಆರ್.ಲೋಬೊ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿ ಮಂಗಳೂರು ನಗರವನ್ನು ಈ ಮೊದಲೇ ಸ್ಮಾರ್ಟ್ ಸಿಟಿ ಘೋಷಣೆ ಮಾಡಿಬೇಕಿತ್ತಾದರು ಕೇಂದ್ರ ಸರ್ಕಾರ ಈ ಹಂತದಲ್ಲಿ ಮಾಡಿದ್ದಕ್ಕಾಗಿ ಅಭಿವಂದನೆ ಸಲ್ಲಿಸಿದರು.

ಮಂಗಳೂರು ಸ್ಮಾರ್ಟ್ ಸಿಟಿಯಾಗಿರುವುದರಿಂದ ಹೂಡಿಕೆದಾರರು ಹೂಡಿಕೆ ಮಾಡಲು ಆಸಕ್ತಿತೋರಿಸುತ್ತಾರೆ, ಯುವಕರಿಗೂ ಉದ್ಯೋಗಾವಕಾಶಗಳು ಹೆಚ್ಚುತ್ತವೆ ಎಂದು ಹೇಳಿದ್ದಾರೆ.