ಮಂಗಳೂರು,ಅ.6: ನಗರದ ಕುಡುಪು, ಶಕ್ತಿನಗರ, ಕದ್ರಿ ಕಂಬಳ ಮುಂತಾದ ಪ್ರದೇಶಗಳಲ್ಲಿ ಕರ್ನಾಟಕ ಸರಕಾರದ ರೂ100 ಕೋಟಿ ಅನುದಾನದ ನಿಧಿಯನ್ನು ಬಳಸಿಕೊಂಡು ನಡೆದಿರುವ ವಿವಿದ ಕಾಮಗಾರಿಗಳನ್ನು ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊ ಮತ್ತು ಮಾನ್ಯ ಜಿಲ್ಲಾಧಿಕಾರಿ ಶ್ರೀ ಎ.ಬಿ.ಇಬ್ರಾಹಿಂ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಪೂರ್ಣಗೊಂಡ ಕಾಮಗಾರಿಗಳನ್ನು ವೀಕ್ಷಿಸಿ ಮತ್ತು ಬಾಕಿ ಇರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.